LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಯುವತಿಯ ಮೃತದೇಹ ನಗ್ನಾವಸ್ಥೆಯಲ್ಲಿ ಪತ್ತೆ!

ಬೆಂಗಳೂರು, 28: ನಗರದ ಆಡಗೋಡಿ ಪ್ರದೇಶದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. 34 ವರ್ಷದ ಪೂಜಾ ದತ್ತ ಎಂಬುವರು ಮೃತ ಯುವತಿಯಾಗಿದ್ದು, ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ದಿನಾಂಕ 23ರಂದು ಪೂಜಾ ಅವರು ದಿನಸಿ ತರಲು ಮನೆಯಿಂದ ಹೊರಗೆ ಬಂದಿದ್ದೇ ಕೊನೆಯ ಬಾರಿ ಇತರರು ಕಂಡಿದ್ದು, ಅದರ ನಂತರ ಆಕೆ ಹೊರಗೆ ಕಾಣಿಸಿಕೊಂಡಿರಲಿಲ್ಲ ಎನ್ನಲಾಗಿದೆ. ಏಪ್ರಿಲ್ 27ರಂದು ಸಂಜೆ ವೇಳೆ ಆಕೆ ವಾಸಿಸುತ್ತಿದ್ದ ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಪಕ್ಕದ ಮನೆಯವರು ಅನುಮಾನಗೊಂಡು ಮನೆ ಮಾಲೀಕರಿಗೆ ಮಾಹಿತಿ ನೀಡಿದರು.

ಪೊಲೀಸರ ಸಮ್ಮುಖದಲ್ಲಿ ಮನೆಯ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ಬೆಚ್ಚಿಬೀಳಿಸುವ ದೃಶ್ಯ ಕಂಡುಬಂದಿತು. ಪೂಜಾ ಅವರು ನಗ್ನ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಮನೆಯ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿದ್ದವು.

ಮೂಲತಃ ಜಾರ್ಖಂಡ‌ನ ಧನಬಾದ ಸಮೀಪದ ಹಿರಾಪುರ ನಿವಾಸಿಯಾಗಿದ್ದ ಪೂಜಾ ದತ್ತ ಅವರು ಕಳೆದ ಮೂರು ವರ್ಷಗಳಿಂದ ಆಡಗೋಡಿಯ ಮುನೇಕ್ಷಪ್ಪ ಲೇಔಟ‌ನಲ್ಲಿ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ಅವರು ನಗರದ ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.

ಈ ಕುರಿತು ಮಾತನಾಡಿದ ಮನೆ ಮಾಲಕಿ ಜನಕಮ್ಮ ಅವರು ಕೆಲವು ಮಾಹಿತಿ ಹಂಚಿಕೊಂಡಿದ್ದು ಹೆಚ್ಚಾಗಿ ಹಿಂದಿಯಲ್ಲೇ ಮಾತನಾಡುತ್ತಿದ್ದ ಪೂಜಾ ಒಂಟಿಯಾಗಿಯೇ ವಾಸಿಸುತ್ತಿದ್ದರು. ಆದರೆ ಒಬ್ಬ ಯುವಕ ಆಗಾಗ ಮನೆಗೆ ಬರುತ್ತಿದ್ದನು. ಆ ಯುವಕ ಬಂದಾಗಲೆಲ್ಲ ಪೂಜಾ ಜೊತೆ ಜಗಳವಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಸದ್ಯ ಆಡಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದು, ಆಕೆಯನ್ನು ಭೇಟಿ ಮಾಡುತ್ತಿದ್ದ ಆ ಯುವಕ ಯಾರು ಎಂಬುದನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ