ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಿತ್ತೂರ ತಹಶೀಲ್ದಾರರನ್ನು ಹಿಡಿದುಕೊಟ್ಟಿದ್ದ ದೂರುದಾರನ ತಂದೆಯ ಸಾವು

ಕಿತ್ತೂರು : ಜಮೀನಿನ ಖಾತೆ ಬದಲಾವಣೆಗಾಗಿ ಲಂಚ ಕೇಳಿದ್ದ ಕಿತ್ತೂರು ತಹಶೀಲ್ದಾರ, ಗುಮಾಸ್ತರ ನ್ನು ಲಂಚದ ಸಮೇತ ಲೋಕಾಯುಕ್ತರಿಗೆ ಬಲೆಗೆ ಹಿಡಿದುಕೊಟ್ಟ ಅರ್ಜಿದಾರರ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕಿತ್ತೂರು ತಾಲೂಕಿನ ಖೋದಾನಪುರ ಗ್ರಾಮದಲ್ಲಿ ಬಾಪುಸಾಹೇಬ ಇನಾಮದಾರ ಅವರು ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಇವರ ಪುತ್ರ ರಾಜೇಂದ್ರ ಇನಾಮದಾರ ದೂರು ನೀಡಿದ್ದರು.

10 ಎಕರೆ ಜಮೀನಿನ ಖಾತಾ ಬದಲಾವಣೆ ಸಂಬಂಧ ಲಂಚ ಕೇಳಿದ್ದ ತಹಶೀಲದಾರ ಮೇಲೆ ಅವರು ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು. ನಿನ್ನೆ ತಡರಾತ್ರಿ ತಹಶೀಲದಾರರ ಮನೆಯಲ್ಲಿ 2 ಲಕ್ಷ ರೂ. ಹಣ ಪಡೆಯುವಾಗ ತಹಶೀಲದಾರ ಸೋಮಲಿಂಗಪ್ಪ ಹಾಲಗಿ, ಗುಮಾಸ್ತ ಪ್ರಸನ್ನ ಜಿ. ಇವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.

ತಡರಾತ್ರಿ ಕಿತ್ತೂರು ತಾಲ್ಲೂಕಿನಾದ್ಯಂತ ಈ ಸುದ್ದಿ ಹಬ್ಬಿದ್ದು, ಇದರಿಂದ ಆಘಾತಕ್ಕೆ ಒಳಗಾಗಿ ಬಾಪುಸಾಹೇಬ ಇನಾಮದಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಕಿತ್ತೂರು ತಹಶೀಲ್ದಾರ ಮತ್ತು ಗುಮಾಸ್ತರನ್ನು ಲೋಕಾಯುಕ್ತ ಪೊಲೀಸರು ಬೆಳಗಾವಿಗೆ ಕರೆತಂದಿದ್ದಾರೆ. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಆರೋಪಿಗಳ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಲೋಕಾಯುಕ್ತ ಕೋರ್ಟ ನ್ಯಾಯಾಧೀಶರ ಮನೆಗೆ ಆರೋಪಿತರನ್ನು ಕರೆದೊಯ್ಯಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.