LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ದಪ್ಪಗಿದ್ದಾಳೆ ಎಂದು ಪತ್ನಿಯ ಕತ್ತು ಹಿಸುಕಿ ಕೊಂದ ಪತಿ!

ಧಾರವಾಡ, ಜುಲೈ 1: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ಪತ್ನಿ ದಪ್ಪಗಿದ್ದಾಳೆ ಎಂಬ ಕಾರಣ ಹೇಳಿ ಕತ್ತು ಹಿಸುಕಿ ಕೊಲೆ ಮಾಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಪತಿ ಬಸವರಾಜ ವಡ್ಡರನನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಮಹಿಳೆಯನ್ನು ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಪ್ರಿಯಾಂಕಾ ಕಮಲಾಕರ (29) ಎಂದು ಗುರುತಿಸಲಾಗಿದೆ. 2024ರಲ್ಲಿ ಬಸವರಾಜ ಮತ್ತು ಪ್ರಿಯಾಂಕಾ ವಿವಾಹವಾಗಿದ್ದು, ಮದುವೆಯಾದ ಬಳಿಕ ಪತ್ನಿಗೆ ವರದಕ್ಷಿಣೆಗಾಗಿ ನಿರಂತರ ಕಿರುಕುಳ ನೀಡುತ್ತಿದ್ದ ಎನ್ನುವ ಆರೋಪ ಕೇಳಿಬಂದಿದೆ.

ತವರು ಮನೆಯಿಂದ ಹಣ ಹಾಗೂ ಚಿನ್ನ ತರುವಂತೆ ಒತ್ತಾಯಿಸುತ್ತಿದ್ದ ಆರೋಪಿಯು, "ನೀನು ದಪ್ಪಗಿದ್ದೀಯ, ಗರ್ಭಿಣಿಯಾಗುವುದಿಲ್ಲ" ಎಂದು ಅವಮಾನಿಸುತ್ತಿದ್ದನೆಂದು ಮೃತಳ ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ. ಇದೇ ವಿಚಾರವನ್ನು ನೆಪ ಮಾಡಿಕೊಂಡು ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆ ಎರಡು ದಿನಗಳ ಹಿಂದೆಯೇ ನಡೆದಿದ್ದರೂ, ಮಂಗಳವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಆರೋಪಿಯು ಪ್ರಿಯಾಂಕಾ ಸಾವಿನ ವಿಷಯವನ್ನು ಕುಟುಂಬಸ್ಥರಿಗೆ ತಿಳಿಸಿದ್ದಾನೆ. ಮಾಹಿತಿ ತಿಳಿದ ಮೃತಳ ಪೋಷಕರು ಕಲಬುರಗಿಯಿಂದ ನವಲಗುಂದಕ್ಕೆ ಆಗಮಿಸಿ, ಮಂಗಳವಾರ ತಡರಾತ್ರಿ ನವಲಗುಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ನವಲಗುಂದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಕೊಲೆಗೆ ನಿಖರ ಕಾರಣ ಹಾಗೂ ಇತರೆ ಆರೋಪಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಹ್ಯಾಕಾಶ ನಿಲ್ದಾಣ ತಲುಪಿದ ಭಾರತೀಯ ಮೂಲದ ಅನಿಲ ಮೆನನ್ಅಮೆರಿಕ ದಿಗ್ಬಂಧನಕ್ಕೆ ಇರಾನ್ ತಿರುಗೇಟು; ತೈಲ ರಫ್ತು ಸ್ಥಗಿತದ ಎಚ್ಚರಿಕೆಧರ್ಮಸ್ಥಳ ಪ್ರಕರಣ: 7,000 ಪುಟಗಳ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆ'ಸ್ತನ ಹಿಡಿದರೆ ಅತ್ಯಾಚಾರ ಯತ್ನವಲ್ಲ' ಎಂದ ಹೈಕೋರ್ಟ: ಸುಪ್ರೀಮ ಕೋರ್ಟ ತರಾಟೆಕಂದಾಯ ಇಲಾಖೆಯಲ್ಲಿ ಭಾರಿ ವರ್ಗಾವಣೆ; 30ಕ್ಕೂ ಹೆಚ್ಚು ತಹಶೀಲ್ದಾರಗಳಿಗೆ ಹೊಸ ನಿಯುಕ್ತಿಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಅವಧಿ ವಿಸ್ತರಣೆಲಾರಿ ಡಿಕ್ಕಿಗೆ ಬೈಕ್ ಸವಾರನ ಸಾವು : ಅವೈಜ್ಞಾನಿಕ ವಿನ್ಯಾಸ ವಿರೋಧಿಸಿ ಪ್ರತಿಭಟನೆಮಹಿಳಾ ಸಂಘದ ಹೆಸರಲ್ಲಿ ₹43.40 ಲಕ್ಷ ವಂಚನೆ: ಇಬ್ಬರು ಮಹಿಳೆಯರ ಬಂಧನಕಡಲೆಕಾಯಿ ಗಂಟಲಲ್ಲಿ ಸಿಲುಕಿ 3 ವರ್ಷದ ಬಾಲಕನ ಸಾವುಡಿಟರ್ಜೆಂಟ್ ಸೇರಿಸಿ ಕೃತಕ ರಾಸಾಯನಿಕಯುಕ್ತ ಹಾಲು ತಯಾರಿಸುವ ರಾಕ್ಷಸರ ಜಾಲ ಪತ್ತೆ!