ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆ ಘಳಿಗೆಯಲ್ಲಿ ಬೆಳಗಾವಿ ಭೇಟಿ ರದ್ದು ಮಾಡಿದ ಮಹಾರಾಷ್ಟ್ರ ಸಚಿವರು

ಬೆಳಗಾವಿ: ಬೆಳಗಾವಿ ಭೇಟಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡಿಲ್ಲ ಹೀಗಾಗಿ ಬೆಳಗಾವಿಯ ಇಂದಿನ ಭೇಟಿಯನ್ನು ರದ್ದುಗೊಳಿಸಿದ್ದೇವೆ ಎಂದು ಮಹಾರಾಷ್ಟ್ರ ಸಚಿವ ಶಂಭುರಾಜ ದೇಸಾಯಿ ಹೇಳಿದ್ದಾರೆ.

ಮೊದಲಿಗೆ ಡಿಸೆಂಬರ್ 3 ರಂದು ಬೆಳಗಾವಿಗೆ ಭೇಟಿ ನೀಡಲು ನಿರ್ಧರಿಸಿದ್ದೆವು. ಆದರೆ, ಕೆಲವು ದಲಿತ ಸಂಘಟನೆಗಳು ಡಿಸೆಂಬರ್ 6 ರಂದು ಬರಲು ಮನವಿ ಮಾಡಿದ್ದರಿಂದ ಡಿಸೆಂಬರ್ 6 ರಂದು ಬೆಳಗಾವಿಗೆ ತೆರಳಲು ನಿರ್ಧರಿಸಿದ್ದೆವು. ಇಂದು ಡಾ. ಬಿಆರ್ ಅಂಬೇಡ್ಕರ ಅವರ ಮಹಾ ಪರಿನಿರ್ವಾಣ ದಿನವಾಗಿದ್ದು, ಶ್ರದ್ಧಾಂಜಲಿ ಸಲ್ಲಿಕೆ ವೇಳೆ ಅಹಿತಕರ ಘಟನೆ ನಡೆಯಬಾರದು, ಕಾನೂನು ವ್ಯವಸ್ಥೆಗೆ ಧಕ್ಕೆ ಆಗಬಾರದೆಂದು ಬೆಳಗಾವಿ ಭೇಟಿ ರದ್ದು ಮಾಡಲಾಗಿದೆ ಎಂದರು.

ಶ್ರದ್ಧಾಂಜಲಿ ಸಲ್ಲಿಕೆಗೆ ನಮಗೆ ಅನುಮತಿ ನೀಡಬಹುದಿತ್ತು. ಕರ್ನಾಟಕ ಸರ್ಕಾರ ಅವಕಾಶ ಕಲ್ಪಿಸಿದ್ದರೆ ಒಳ್ಳೆಯದಾಗುತ್ತಿತ್ತು. ಆದರೆ, ಅನುಮತಿ ನೀಡಿಲ್ಲ. ಹೀಗಾಗಿ ಬೆಳಗಾವಿ ಭೇಟಿ ರದ್ದು ಮಾಡಲಾಗಿದೆ ಎಂದು ಮಹಾರಾಷ್ಟ್ರ ಸಚಿವ ಶಂಭುರಾಜ ದೇಸಾಯಿ ಹೇಳಿದ್ದಾರೆ.

ಇಂದು ಬೆಳಗಾವಿಗೆ ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ ಪಾಟೀಲ ಮತ್ತು ಶಂಭುರಾಜ ದೇಸಾಯಿ ಭೇಟಿ ನೀಡಬೇಕಿತ್ತು, ಆದರೆ ಕರ್ನಾಟಕ ಸರ್ಕಾರ ಅವಕಾಶ ಕೊಟ್ಟಿಲ್ಲ. ಕಾರಣ ಕೊನೆ ಘಳಿಗೆಯಲ್ಲಿ ಭೇಟಿ ರದ್ದು ಮಾಡಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.