LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕೆಲ ದುಷ್ಟ ಶಕ್ತಿಗಳಿಂದ ಬೆಳಗಾವಿಯ ಶಾಂತಿ ಭಂಗಕ್ಕೆ ಯತ್ನ -ಮುಸ್ಲಿಮ ಮುಖಂಡರ ಹೇಳಿಕೆ

ಬೆಳಗಾವಿ, ೧೧- ಇಲ್ಲಿಯ ಸಾರಥಿ ನಗರ ಮಸೀದಿ ಕುರಿತು ವಿನಾಕಾರಣ ಹೇಳಿಕೆ ನೀಡುತ್ತ

ಕೆಲ ದುಷ್ಟ ಶಕ್ತಿಗಳು ಬೆಳಗಾವಿಯ ಶಾಂತಿ ಸುವ್ಯವಸ್ಥೆ ಹಾಳು ಮಾಡಲು ಯತ್ನಿಸುತ್ತಿವೆ ಎಂದು ಮುಸ್ಲಿಮ ಧಾರ್ಮಿಕ ಮುಖಂಡರು ಹೇಳಿದ್ದಾರೆ.



ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಮುಸ್ಲಿಮ ಸಮಾಜದ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.



ಸಾರಥಿನಗರ ಮಸೀದಿ ಕುರಿತು ವಿನಾಕಾರಣ ವಿವಾದ ಎಬ್ಬಿಸಿ ಸಮಾಜದ ಶಾಂತಿಗೆ ಭಂಗ ತರುವ ಪ್ರಯತ್ನ ಮಾಡಲಾಗುತ್ತಿದೆ. ಮಸೀದಿಗೆ ಸಂಬಂಧಿಸಿದ ದಾಖಲಾತಿಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡುತ್ತೇವೆ ಮತ್ತು ಇದಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳ ಗಮನಕ್ಕೆ ತರುತ್ತೇವೆ ಎಂದು ಬೆಳಗಾವಿಯ ಉಲೇಮಾಗಳು ಹೇಳಿದರು.



ಬೆಳಗಾವಿ ಶಾಂತಿಪ್ರಿಯ ಪ್ರದೇಶ ನಗರವಾಗಿದ್ದು, ಕೆಲವು ದುಷ್ಟ ಸಂಘಟನೆಗಳು ವಿನಾಕಾರಣ ಗೊಂದಲ ಉಂಟು ಮಾಡುತ್ತಿವೆ. ನಿನ್ನೆ ಸಾರಥಿ ನಗರದಲ್ಲಿ ಕೆಲ ಜನ ಜಮಾಯಿಸಿ ಮಸೀದಿ ಕುರಿತು ಸಭೆ ಮಾಡಿ ಹೇಳಿಕೆಗಳನ್ನು ಕೊಡುವುದನ್ನು ನಾವು ಖಂಡಿಸುತ್ತೇವೆ. ಕಾನೂನು ಪ್ರಕಾರ ಮಸೀದಿ ಕುರಿತು ಪ್ರಶ್ನೆ ಮಾಡುವ ಅಧಿಕಾರ ಇವರಿಗಿಲ್ಲ. ದಾಖಲೆ ಪರಿಶೀಲಿಸುವುದು ಸರಕಾರದ ಕೆಲಸ. ಹೇಳಿಕೆ ಕೊಡುವುದನ್ನು ಬಿಟ್ಟು ಆಡಳಿತ ನಡೆಸುವವರ ಕಡೆ ಹೋಗಿ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಹೇಳಿದರು.



ಮಸೀದಿ ಕುರಿತು ನಮ್ಮ ಬಳಿ ದಾಖಲಾತಿಗಳೆಲ್ಲ ಸರಿ ಇದ್ದು, ನಾವು ಕೂಡಾ ಜಿಲ್ಲಾಧಿಕಾರಿ ಹಾಗು ಪೊಲೀಸ್ ಇಲಾಖೆಗೆ ಸಹಕಾರ ನೀಡಿದ್ದೇವೆ ಎಂದು ಫಜಲ್ ಪಠಾಣ ಹೇಳಿದರು.



ಸುದ್ದಿಗೋಷ್ಠಿಯಲ್ಲಿ ನಗರ ಸೇವಕ ಅಜೀಮ ಪಟವೇಕರ, ಮುಫ್ತಿ ಮಂಜುರಾಲಂ, ಮೌಲಾನಾ ಸಲೀಮ, ಮುಸ್ತಾಕ ಅಶ್ರಫ, ನಗರ ಸೇವಕ ರೇಶ್ಮಾ ಬೈರಕದಾರ ಆದಿ ಉಪಸ್ಥಿತರಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಗದದ ಕಡತಗಳಿಗೆ ವಿದಾಯ: ಪಾಲಿಕೆ ಪಿಐಡಿ ಸೇವೆ ಸಂಪೂರ್ಣ ಆನ್‌ಲೈನ್‌ಗೆಮಾಡೆಲ್ ಲಗೇಜ್‌ನಲ್ಲಿ 11.82 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆಕಿವೀಸ್ ಕ್ರಿಕೆಟ್‌ನ ಸುವರ್ಣ ಅಧ್ಯಾಯ ಅಂತ್ಯ; ವಿಲಿಯಮ್ಸನ್ ನಿವೃತ್ತಿನಿನ್ನೆ ಇಸ್ರೇಲ್‌ ದಾಳಿಗೆ ಬೆಂಬಲ, ಇಂದು ಪುತ್ರನಿಗಾಗಿ ಕಣ್ಣೀರು: ಹಳೆಯ ಪೋಸ್ಟಗಳು ವೈರಲ್!ಮಾವಿನ ಹಣ್ಣು ಸೇವಿಸಿ ಬೀದರ ಮೂಲದ ಇಬ್ಬರು ಸಹೋದರಿಯರ ಸಾವುಕರ್ನಾಟಕದ ನೀರಿನ ಹಕ್ಕಿಗೆ ದೆಹಲಿಯಲ್ಲಿ ಧ್ವನಿ : ಕೃಷ್ಣಾ ತೀರ್ಪಿನಿಂದ ಮಹದಾಯಿ ತನಕ ಬಾಕಿ ಬೇಡಿಕೆಗಳಿಗೆ ವೇಗ ನೀಡುವಂತೆ ಒತ್ತಾಯಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ: ವಿಜಯೇಂದ್ರ ಆರೋಪಇವಿಎಂಗಳ ಭಸ್ಮ : ಕೋಲ್ಕತ್ತಾ ಕಟ್ಟಡ ಅಗ್ನಿ ಅವಘಡದ ಹಿಂದೆ ಸಂಚು ಶಂಕೆಕಾನೂನಿನ ಭಯ ಮಾಯವೇ? ರಸ್ತೆಯಲ್ಲಿ ಉಗುಳಬೇಡಿ ಎಂದ ವೃದ್ಧನಿಗೆ ಅಶ್ಲೀಲ ಪದಗಳಿಂದ ನಿಂದಿಸಿ ಹಲ್ಲೆಭಾರತದಲ್ಲಿನ ಅಸಮಾನತೆ ಕುರಿತ ಅಧ್ಯಯನಕ್ಕೆ ಅರ್ಥಶಾಸ್ತ್ರಜ್ಞ ಜೀನ್ ಡ್ರೇಝ್‌ಗೆ ಪ್ರಶಸ್ತಿ