LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮತ ಎಣಿಕೆಯಲ್ಲಿ ಕೇಂದ್ರ ಸಿಬ್ಬಂದಿ ನಿಯೋಜನೆಗೆ ಟಿಎಂಸಿ ವಿರೋಧ: ಅರ್ಜಿ ತಿರಸ್ಕರಿಸಿದ ಸುಪ್ರೀಮ ಕೋರ್ಟ

ಹೊಸದಿಲ್ಲಿ, ಮೇ 2 : ಪಶ್ಚಿಮ ಬಂಗಾಳದಲ್ಲಿ ಮತ ಎಣಿಕೆಗೆ ಕೇಂದ್ರ ಸರ್ಕಾರಿ ಸಿಬ್ಬಂದಿ ನಿಯೋಜನೆಗೆ ವಿರೋಧಿಸಿ ಟಿಎಂಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶನಿವಾರ ಪರಿಗಣಿಸಿ, ಯಾವುದೇ ಹೊಸ ಆದೇಶ ನೀಡಲು ನಿರಾಕರಿಸಿದೆ. ಚುನಾವಣಾ ಆಯೋಗ ಹೊರಡಿಸಿದ ಸುತ್ತೋಲೆಯನ್ನು ಜಾರಿಗೆ ತರಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

ಎಪ್ರಿಲ್ 13ರಂದು ಹೊರಡಿಸಲಾದ ಸುತ್ತೋಲೆಯಂತೆ, ಎಣಿಕೆ ಪ್ರಕ್ರಿಯೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರನ್ನು ನಿಯೋಜಿಸುವುದಾಗಿ ಚುನಾವಣಾ ಆಯೋಗ ನೀಡಿದ ಭರವಸೆಯನ್ನು ಪೀಠ ದಾಖಲಿಸಿಕೊಂಡಿದೆ.

ಎಣಿಕೆ ವ್ಯವಸ್ಥೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್ ತಿರಸ್ಕರಿಸಿದ್ದ ಹಿನ್ನೆಲೆಯಲ್ಲಿ, ಅದರ ವಿರುದ್ಧ ಟಿಎಂಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಹಾಗೂ ಜೋಯ್ಮಲ್ಯ ಬಾಗ್ಚಿ ಅವರಿದ್ದ ವಿಶೇಷ ಪೀಠವು ವಿಚಾರಣೆ ನಡೆಸಿತು. ಮೇ 4ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ತುರ್ತು ಮಹತ್ವ ದೊರಕಿತ್ತು.

ವಿಚಾರಣೆಯ ವೇಳೆ ಮತ ಎಣಿಕೆಯ ಸಮಯದಲ್ಲಿ ಟಿಎಂಸಿ ಪ್ರತಿನಿಧಿಗಳು ಹಾಜರಿರಲಿದ್ದಾರೆ ಎಂದು ಪೀಠ ಗಮನಿಸಿತು. ಚುನಾವಣಾ ಆಯೋಗದ ಸುತ್ತೋಲೆ ನಿಯಮಗಳಿಗೆ ವಿರುದ್ಧವಲ್ಲ ಎಂದು ಅಭಿಪ್ರಾಯಪಟ್ಟಿತು.

ಟಿಎಂಸಿ ಪರ ಹಿರಿಯ ವಕೀಲರಾದ ಕಪಿಲ್ ಸಿಬಲ್ ಹಾಗೂ ಮೀನಾಕ್ಷಿ ಅರೋರಾ, ಎಪ್ರಿಲ್ 13ರ ಸುತ್ತೋಲೆ ಕುರಿತು ಅರ್ಜಿದಾರರಿಗೆ ಎಪ್ರಿಲ್ 29ರಂದು ಮಾತ್ರ ತಿಳಿಸಲಾಯಿತು ಎಂದು ಹೇಳಿದರು. ಚುನಾವಣಾ ಆಯೋಗದ ಕ್ರಮದ ಮೇಲೂ ಅವರು ಶಂಕೆ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಯಾಗಿ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಡಿ ಎಸ್ ನಾಯ್ಡು, ಎಣಿಕೆ ಪ್ರಕ್ರಿಯೆಯ ಮೇಲಿನ ಸಂಪೂರ್ಣ ನಿಯಂತ್ರಣ ರಾಜ್ಯ ಸರ್ಕಾರಿ ಅಧಿಕಾರಿಯಾದ ಚುನಾವಣಾಧಿಕಾರಿಗೇ ಇರುವುದಾಗಿ ಹೇಳಿದರು. ಸಿಬ್ಬಂದಿಯನ್ನು ಆಯ್ಕೆ ಮಾಡುವ ಅಧಿಕಾರವೂ ಅವರಿಗೇ ಸೇರಿದೆ ಎಂದು ವಾದಿಸಿದರು. ಕೇಂದ್ರ ಸರ್ಕಾರಿ ಸಿಬ್ಬಂದಿ ನಿಯೋಜನೆ ಕುರಿತ ಸುತ್ತೋಲೆಯನ್ನು ಅಕ್ಷರಶಃ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು.

ಎಣಿಕೆ ಮೇಲ್ವಿಚಾರಕರಾಗಿ ಒಬ್ಬ ರಾಜ್ಯ ಸರ್ಕಾರಿ ಉದ್ಯೋಗಿ ಹಾಗೂ ಒಬ್ಬ ಕೇಂದ್ರ ಸರ್ಕಾರಿ ಉದ್ಯೋಗಿಯನ್ನು ನೇಮಿಸಲಾಗುವುದು ಎಂದು ಅವರು ತಿಳಿಸಿದರು.

ಎಣಿಕೆ ಅಧಿಕಾರಿಯನ್ನು ಕೇಂದ್ರ ಸರ್ಕಾರದ ನಾಮನಿರ್ದೇಶಿತ ಎಂದು ಹೇಳುವುದು ವಿಶೇಷ ಮಹತ್ವದ್ದಲ್ಲ ಎಂದು ನ್ಯಾಯಮೂರ್ತಿ ಬಾಗ್ಚಿ ಹೇಳಿದರು. ಇಂತಹ ನಿರ್ಧಾರಗಳು ಚುನಾವಣಾ ಆಯೋಗದ ತೀರ್ಮಾನಕ್ಕೆ ಒಳಪಟ್ಟಿರುತ್ತವೆ ಎಂದರು.

ಎಣಿಕೆ ವೇಳೆ ಪಕ್ಷಗಳ ಪ್ರತಿನಿಧಿಗಳು ಹಾಜರಿರುತ್ತಾರೆ ಎಂದು ಪೀಠ ತಿಳಿಸಿದೆ. ಕೇಂದ್ರ ಸರ್ಕಾರಿ ಅಧಿಕಾರಿಗಳಾದ ವೀಕ್ಷಕರು, ಮೇಲ್ವಿಚಾರಕರು ಮತ್ತು ಸಹಾಯಕರು ಈಗಾಗಲೇ ಎಣಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದೂ ಹೇಳಿದೆ.

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ, ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ ನಂತರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ