ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ : ರಮೇಶ ಜಾರಕಿಹೊಳಿ 

ಬೆಳಗಾವಿ: ಮಾಜಿ ಸಚಿವ ರಮೇಶ‌ ಜಾರಕಿಹೊಳಿ ಅವರು ಜೆಡಿಎಸ್‌ ಗೆ ಸೇರುತ್ತಾರೆ ಎಂಬ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಡುವುದಿಲ್ಲ ಎಂದು ರಮೇಶ‌ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ ಸಮೀಪದ ಬೆಳಗುಂದಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನನ್ನ ಮನಸ್ಸಿಗೆ ಬೇಜಾರಾಗಿ ಒಂದು ವರ್ಷದಿಂದ ಮಾಧ್ಯಮದಿಂದ ದೂರವಿದ್ದೆ. ಅನಿವಾರ್ಯವಾಗಿ ಇಂದು ಈ ವಿಷಯ ಸ್ಪಷ್ಟಪಡಿಸುವೆ ಎಂದರು.

ಎಚ್.ಡಿ.ಕುಮಾರಸ್ವಾಮಿ ಜೊತೆ ನಾನು ಮಾತನಾಡಿದ್ದು ನಿಜ. ನನಗೆ ಸುಳ್ಳು ಹೇಳುವ ಚಟವಿಲ್ಲ. ದಿನನಿತ್ಯ ಕುಮಾರಸ್ವಾಮಿ ನನ್ನ ಜೊತೆ ಫೋನ್‍ನಲ್ಲಿ ಮಾತನಾಡುತ್ತೇನೆ. ಆದರೆ ನಾನು ಬಿಜೆಪಿ ಬಿಡುವ ಪ್ರಶ್ನೆ ಇಲ್ಲ ಎಂದರು.

ನಿತ್ಯವೂ ಕುಮಾರಸ್ವಾಮಿ ನನ್ನ ಜೊತೆ ಫೋನ್ ನಲ್ಲಿ ಮಾತನಾಡುತ್ತಿರುತ್ತಾರೆ. ನಿನ್ನ ಕೆಲಸ ನೀನು ಮಾಡು, ನನ್ನ ಕೆಲಸ ನಾನು ಮಾಡುತ್ತೇನೆ. ನಮ್ಮಿಬ್ಬರ ಉದ್ದೇಶ ಒಂದೇ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬಾರದು ಎಂದು ಹೇಳಿದ್ದಾರೆ ಎಂದರು.

ಈ ಹಿಂದೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮುಂದಿನ ದಿನಗಳಲ್ಲಿ ಕಾದು ನೋಡಿ, ಜೆಡಿಎಸ್ ಬಿಟ್ಟವರೆಲ್ಲಾ ವಾಪಸ್ ಬರ್ತಾರೆ. ಯಾರ್ಯಾರು ಬರ್ತಾರೆ ಅನ್ನೋದನ್ನು ಕಾದು ನೋಡಿ ಎಂದು ಹೇಳಿದ್ದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.