ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯದ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯಲು ಚಿಂತನೆ

ಬೆಂಗಳೂರು : ಶಾಲೆಗಳಲ್ಲಿ ಹಿಜಾಬ್, ಪಠ್ಯ ಪರಿಷ್ಕರಣೆ ವಿವಾದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದ ಶುರುವಾಗಿದೆ. ರಾಜ್ಯಾದ್ಯಂತ 7 ಸಾವಿರಕ್ಕೂ ಹೆಚ್ಚು ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ ಬಳಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ಶಿಕ್ಷಣ ಇಲಾಖೆ ಹೊಸದಾಗಿ 7000ಕ್ಕೂ ಅಧಿಕ ಶಾಲಾ ಕಾಲೇಜು ಕೊಠಡಿಗಳಿಗೆ ಸ್ವಾಮಿ ವಿವೇಕಾನಂದರ ನೆನಪಿನಲ್ಲಿ ವಿವೇಕ ಶಾಲೆ ಎಂದು ಹೆಸರಿಡಲು ಮುಂದಾಗಿದ್ದು, ಈ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಸಲು ಚಿಂತನೆ ನಡೆಸಿದೆ. ಇಲಾಖೆಯ ಈ ನಡೆಗೆ ಕೆಲವರಿಂದ ಖಂಡನೆ ವ್ಯಕ್ತವಾಗಿದೆ.

ಶಿಕ್ಷಣ ಇಲಾಖೆ ವಿವೇಕಾನಂದರ ಹೆಸರನ್ನು ಉಪಯೋಗಿಸಿಕೊಂಡು ಶಾಲೆಗಳನ್ನು ಕೇಸರಿಮಯ ಮಾಡಲು ಮುಂದಾಗಿದೆ. ಪಠ್ಯಪುಸ್ತಕ ಪರಿಷ್ಕರಣೆಯ ನಂತರ ಎರಡನೇ ಸುತ್ತಿನ ಕೇಸರೀಕರಣ ಶುರು ಮಾಡಿದೆ ಎಂದು ಆರೋಪಿಸಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.