ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೀನು ಸಾಕಾಣಿಕಾ ಹೊಂಡಕ್ಕೆ ವಿಷ ಬೆರಸಿದ ಕಿರಾತಕರು; ಸಾವಿರಾರು ಮೀನುಗಳ ಮಾರಣಹೋಮ

ಬೀದರ್: ಮೀನು ಸಾಕಾಣಿಕಾ ಹೊಂಡಕ್ಕೆ ಕಿರಾತಕರು ವಿಷ ಬೆರಸಿ ಸಾವಿರಾರು ಮೀನುಗಳ ಮಾರಣಹೋಮಕ್ಕೆ ಕಾರಣವಾಗಿರುವ ಘಟನೆ ಬೀದರನಲ್ಲಿ ನಡೆದಿದೆ.



ಬೀದರಿನ ಆಯಾಸಪುರದಲ್ಲಿ ಈ ಘಟನೆ ನಡೆದಿದೆ. ರೈತ ನಾಗಪ್ಪ ಬಂಡೆ ಎಂಬುವವರು ತಮ್ಮ ತೋಟದಲ್ಲಿ 4 ಹೊಂಡಗಳಲ್ಲಿ ಮೀನು ಸಾಕಾಣಿಕೆ ಮಾಡುತ್ತಿದ್ದರು. ಯಾರೋ ಕಿಡಿಗೇಡಿಗಳು ನಾಲ್ಕೂ ಹೊಂಡಗಳಲ್ಲಿ ವಿಷ ಬೆರೆಸಿ ಮೀನುಗಳನ್ನೆಲ್ಲ ಸಾಯಿಸಿದ್ದಾರೆ.

5000ಕ್ಕೂ ಹೆಚ್ಚು ಮೀನುಗಳು ಸಾವನ್ನಪ್ಪಿವೆ. ಬೀದರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.