LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹಾವೇರಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧನ.

 



ಹಾವೇರಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸವಣೂರಿನ ಅಂಬೇಡ್ಕರ್‌ ನಗರದ ನಿವಾಸಿಗಳಾದ ಲೋಹಿತ ತಂದೆ ಕೃಷ್ಣಪ್ಪ ಮುನಿಯಪ್ಪನವರ(23), ಮಹೇಶ ತಂದೆ

ಅಶೋಕ ಮೈಲಮ್ಮನವರ(23) ಮತ್ತು ಸವಣೂರಿನ ಹಾವಣಗಿ ಪ್ಲಾಟ್‌ ನಿವಾಸಿ ಮನೋಜ ತಂದೆ ಕರಿಯಪ್ಪ ಚಾರಿ(21) ಎಂದು

ಗುರುತಿಸಲಾಗಿದೆ.

ಬಂಧಿತರಿಂದ 3 ಲಕ್ಷ 17 ಸಾವಿರ 400 ರೂಪಾಯಿ ಮೌಲ್ಯದ 3 ಬ್ಯಾಗ್‌ಗಳಲ್ಲಿದ್ದ 7935 ಗ್ರಾಂ ತೂಕದ ಗಾಂಜಾ, 3370

ರೂಪಾಯಿ ನಗದು ಹಣ ಮತ್ತು ಸಣ್ಣ ಸಣ್ಣ ಪ್ಲಾಸ್ಟಿಕ್‌ ಪ್ಯಾಕೆಟ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ನಗರದ ಹಾವೇರಿ-ಗುತ್ತಲ ರಸ್ತೆಯಲ್ಲಿರುವ

ರೈಲ್ವೆ ಬ್ರಿಡ್ಜ್‌ ಹತ್ತಿರ ಆರೋಪಿಗಳು ಸಾರ್ವಜನಿಕ ರಸ್ತೆ ಬದಿಯಲ್ಲಿ ತಮ್ಮ ಸ್ವಂತ ಲಾಭಕ್ಕೋಸ್ಕರ್‌ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದರು

ಎನ್ನಲಾಗಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್ಪಿ ಎಲ್.ವೈ.ಶಿರಕೋಳ, ಡಿವೈಎಸ್‌ಪಿ

ಎಂ.ಎಸ್.ಪಾಟೀಲ ಅವರ ನೇತೃತ್ವದಲ್ಲಿ ಹಾವೇರಿ ಶಹರ ಪೊಲೀಸ್‌ ಠಾಣೆಯ ಉಸ್ತುವಾರಿ ಅಧಿಕಾರಿ ಪೊಲೀಸ್‌ ಇನ್ಸಪೆಕ್ಟರ್‌ ಮೋತಿಲಾಲ್‌ ಪವಾರ

ಅವರ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದ್ದು, ತನಿಖೆ ಮುಂದುವರೆದಿದೆ

ಎಂದು ಎಸ್ಪಿ ಯಶೋದಾ ವಂಟಗೋಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ