LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಭಾರಿ ಮಳೆಗೆ ಗೋವಾ ಹೋಗುವ ಮೂರು ರಸ್ತೆಗಳು ಬಂದ್!

ಬೆಳಗಾವಿ, ೨೫: ಕಳೆದ ಎರಡು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಗೋವಾ ಸಂಪರ್ಕ ಕಲ್ಪಿಸುವ ಇನ್ನೆರಡು ರಸ್ತೆಗಳು ಪ್ರವಾಹದ ಕಾರಣ ಸ್ಥಗಿತ ಆಗಿವೆ.



ಹಲತ್ರಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಖಾನಾಪುರ-ಜಾಂಬೋಟಿ-ಗೋವಾ ಹೆದ್ದಾರಿಯನ್ನು ಸಹ ಮುಚ್ಚಲಾಗಿದೆ.



ಅಲ್ಲದೇ ಖಾನಾಪುರ-ಹೆಮ್ಮಡಗಾ-ಅನಮೋಡ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಭೀಮಗಡ ಸಮೀಪದ ಮಂತುರ್ಗಾ ಬಳಿಯ ಹತಲತ್ರಿ ನದಿ ಮೇಲಿನ ಸೇತುವೆ ಮೇಲೆ 5 ಅಡಿ ನೀರು ಹರಿಯುತ್ತಿರುವುದರಿಂದ ಅಲ್ಲಿ ಸಂಚಾರ ಸ್ಥಗಿತವಾಗಿದೆ.



ಈಗಾಗಲೇ ಬೆಳಗಾವಿ-ಜಾಂಬೋಟಿ ರಸ್ತೆಯ ಕುಸಮಳ್ಳಿ ಸೇತುವೆಯ ಕುಸಿತದಿಂದ ರಸ್ತೆ ಬಂದ್‌ ಆಗಿದ್ದರಿಂದ ಗೋವಾ ಹೋಗಲು ಖಾನಾಪುರ-ಜಾಂಬೋಟಿ ಮೂಲಕ ವಾಹನಗಳು ಸಂಚರಿಸುತ್ತಿದ್ದವು. ಈಗ ಆ ರಸ್ತೆಯ ಸಂಚಾರ ಸಹ ಸಂಪೂರ್ಣವಾಗಿ ಬಂದಾಗಿದೆ.







ಹಬ್ಬಾನಟ್ಟಿಯ ಐತಿಹಾಸಿಕ ಮಾರುತಿ ದೇವಸ್ಥಾನವು ನೀರಿನಲ್ಲಿ ಮುಳುಗಿದೆ. ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಈ ಮಾರ್ಗದಲ್ಲಿ ಪ್ರಯಾಣಿಸುವುದನ್ನು ತಪ್ಪಿಸಲು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ