ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಜೋಡಿ ಕೊಲೆ ಪ್ರಕರಣ : ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪ ಹಿನ್ನೆಲೆಯಲ್ಲಿ ಮಾರಿಹಾಳ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಬೆಳಗಾವಿ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಅವರು ಆದೇಶ ಹೊರಡಿಸಿದ್ದಾರೆ. ಮಾರಿಹಾಳ ಠಾಣೆ ಹೆಡ್​​ಕಾನ್ಸಟೇಬಲ್ ಬಿ.ಎಸ್.ಬಳಗಣ್ಣವರ, ಆರ್.ಎಸ್.ತಳೇವಾಡೆ ಅವರನ್ನು ಅಮಾನತ್ತು ಮಾಡಲಾಗಿದೆ.

ಅಕ್ಟೋಬರ 6ರಂದು ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ರಾತ್ರಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಮಹೇಶ​, ಪ್ರಕಾಶ ಎಂಬುವರ ಹತ್ಯೆಯಾಗಿತ್ತು. ಗ್ಯಾಂಗ್​​ವಾರ್​ ಬಗ್ಗೆ ಮಾಹಿತಿ ಇದ್ದರೂ ಹಿರಿಯ ಅಧಿಕಾರಿಗಳ ಗಮನಕ್ಕೆ ತರದೇ ನಿರ್ಲಕ್ಷ್ಯ ತೋರಿದ ಆರೋಪ ಹಿನ್ನೆಲೆ ಅವರನ್ನು ಅಮಾನತು ಮಾಡಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.