LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಕರ್ನಾಟಕದ ವಿವಾದಿತ ಪ್ರದೇಶಗಳನ್ನೆಲ್ಲ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ -ಉದ್ಧವ

ನಾಗಪುರ: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ವಿವಾದವಿರುವ ಗಡಿ ಪ್ರದೇಶಗಳನ್ನೆಲ್ಲ ಕೇಂದ್ರಾಡಳಿತ ಪ್ರದೇಶ ಎಂದು ಕೇಂದ್ರ ಸರ್ಕಾರ ಘೋಷಿಸಬೇಕು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ ಠಾಕ್ರೆ ಒತ್ತಾಯಿಸಿದ್ದಾರೆ.



ಗಡಿ ವಿವಾದ ಕುರಿತು ಮಹಾರಾಷ್ಟ್ರ ವಿಧಾನ ಪರಿಷತ್ತಿನಲ್ಲಿ ಅವರು ಮಾತನಾಡಿದರು. ಇದು ಕೇವಲ ಭಾಷೆ ಅಥವಾ ಗಡಿಗೆ ಸಂಬಂಧಿಸಿದ್ದಲ್ಲ, ಮಾನವೀಯತೆಗೆ ಸಂಬಂಧಿಸಿದ ವಿಷಯವಾಗಿದೆ ಎಂದು ಹೇಳಿದ್ದಾರೆ.



ಗಡಿ ಗ್ರಾಮಗಳಲ್ಲಿ ಮರಾಠಿಗರ ಅವರ ಭಾಷೆ, ಜೀವನಶೈಲಿ ಮರಾಠಿಯದ್ದಾಗಿದೆ. ಈಗ ವಿಷಯ ಸುಪ್ರೀಮ ಕೋರ್ಟನಲ್ಲಿರುವ ಕಾರಣ ಸದ್ಯ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.



ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಗಡಿ ವಿವಾದ ಕುರಿತು ತಮ್ಮ ಸರ್ಕಾರದ ನಿಲುವು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.



ಮಹಾರಾಷ್ಟ್ರದ ಜೊತೆಗೆ ವಿಲೀನಗೊಳಿಸಿ ಎಂದು ಬೆಳಗಾವಿ ಮಹಾನಗರಪಾಲಿಕೆ ನಿರ್ಣಯ ಅಂಗೀಕರಿಸಿದರೆ ಅದರ ವಿರುದ್ಧವೇ ಕ್ರಮ ಜರುಗಿಸಲಾಗುತ್ತದೆ. ಕೇಂದ್ರ ಸರ್ಕಾರ ಈ ವಿಷಯದಲ್ಲಿ ರಾಜ್ಯದ ರಕ್ಷಣೆಗೆ ಬರಬೇಕು ಎಂದು ಸಲಹೆ ಮಾಡಿದರು.



ಮಹಾರಾಷ್ಟ್ರ ಗಡಿಯ ಕೆಲ ಗ್ರಾಮ ಪಂಚಾಯತಿಗಳು ತೆಲಂಗಾಣ ಮತ್ತು ಕರ್ನಾಟಕದ ಜೊತೆ ತಮ್ಮನ್ನು ವಿಲೀನಗೊಳಿಸಲು ಕೋರಿ ನಿರ್ಣಯ ಅಂಗೀಕರಿಸಿವೆ. ಅವುಗಳ ವಿರುದ್ಧ ಕ್ರಮ ಜರುಗಿಸುವ ಧೈರ್ಯ ಮಹಾರಾಷ್ಟ್ರದ ಮುಖ್ಯಮಂತ್ರಿಗೆ ಇದೆಯೇ ಎಂದು ಉದ್ಧವ ಪ್ರಶ್ನಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗರ ಪಂಚಮಿ ದಿನವೇ ಹಾವು ಕಡಿತಕ್ಕೆ ಮಹಿಳೆ ಬಲಿಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆ