ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಕಾಡಾ ಅಧ್ಯಕ್ಷರಾಗಿ ಯುವರಾಜ ಕದಮ್ ಅಧಿಕಾರ ಸ್ವೀಕಾರ

ಬೆಳಗಾವಿ: ಇಂದು ಬೆಳಗಾವಿಯ ಕಾಡಾ ಕಚೇರಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳಕರ ಅವರ ಉಪಸ್ಥಿತಿಯಲ್ಲಿ ನೂತನ ಕಾಡಾ ಅಧ್ಯಕ್ಷರಾಗಿ ಯುವರಾಜ ಕದಮ್ ಅಧಿಕಾರ ಸ್ವೀಕರಿಸಿದರು.

ಈ ವೇಳೆ ನೂತನ ಕಾಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಯುವರಾಜ್ ಕದಮ್ ಅವರಿಗೆ ಅಲ್ಲೇ ಇದ್ದ ಮುಖಂಡರು ಹೂಮಾಲೆ ಹಾಕಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ನೂತನ ಕಾಡಾ ಅಧ್ಯಕ್ಷರು ಲೋಕೋಪಯೋಗಿ ಸಚಿವ ಸತೀಶ‌ ಜಾರಕಿಹೊಳಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಶಾಲು ಹೊದಿಸಿ ಹೂಗುಚ್ಚ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ನೂತನ ಕಾಡಾ ಅಧ್ಯಕ್ಷ ಕದಮ್ ಮಾತನಾಡಿ, ನನ್ನ ಸೇವೆಯನ್ನು ಗುರುತಿಸಿ ಪಕ್ಷ ಅವಕಾಶ ನೀಡಿದೆ. ಅದನ್ನು ಬಳಸಿಕೊಂಡು ಬಡವರ ಪರವಾಗಿ ಕೆಲಸ ಮಾಡುತ್ತೇನೆ. ಯೋಜನೆಗಳ ಅನುಷ್ಠಾನಕ್ಕೆ ಕ್ರಮ ವಹಿಸುತ್ತೇನೆ ಎಂದರು.

ಈ ವೇಳೆ ಶಾಸಕ ರಾಜು ಕಾಗೆ, ಮಾಜಿ ಶಾಸಕ ಶಾಮ‌ ಘಾಟಗೆ, ವಿ.ಪ. ಸದಸ್ಯ ಚನ್ನರಾಜ ಹೊಟ್ಟಿಹೊಳಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಇತರರು ಇದ್ದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.