LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿ ಕಾಡಾ ಅಧ್ಯಕ್ಷರಾಗಿ ಯುವರಾಜ ಕದಮ್ ಅಧಿಕಾರ ಸ್ವೀಕಾರ

ಬೆಳಗಾವಿ: ಇಂದು ಬೆಳಗಾವಿಯ ಕಾಡಾ ಕಚೇರಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳಕರ ಅವರ ಉಪಸ್ಥಿತಿಯಲ್ಲಿ ನೂತನ ಕಾಡಾ ಅಧ್ಯಕ್ಷರಾಗಿ ಯುವರಾಜ ಕದಮ್ ಅಧಿಕಾರ ಸ್ವೀಕರಿಸಿದರು.



ಈ ವೇಳೆ ನೂತನ ಕಾಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಯುವರಾಜ್ ಕದಮ್ ಅವರಿಗೆ ಅಲ್ಲೇ ಇದ್ದ ಮುಖಂಡರು ಹೂಮಾಲೆ ಹಾಕಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ನೂತನ ಕಾಡಾ ಅಧ್ಯಕ್ಷರು ಲೋಕೋಪಯೋಗಿ ಸಚಿವ ಸತೀಶ‌ ಜಾರಕಿಹೊಳಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಶಾಲು ಹೊದಿಸಿ ಹೂಗುಚ್ಚ ನೀಡಿ ಸನ್ಮಾನಿಸಿದರು.



ಈ ಸಂದರ್ಭದಲ್ಲಿ ನೂತನ ಕಾಡಾ ಅಧ್ಯಕ್ಷ ಕದಮ್ ಮಾತನಾಡಿ, ನನ್ನ ಸೇವೆಯನ್ನು ಗುರುತಿಸಿ ಪಕ್ಷ ಅವಕಾಶ ನೀಡಿದೆ. ಅದನ್ನು ಬಳಸಿಕೊಂಡು ಬಡವರ ಪರವಾಗಿ ಕೆಲಸ ಮಾಡುತ್ತೇನೆ. ಯೋಜನೆಗಳ ಅನುಷ್ಠಾನಕ್ಕೆ ಕ್ರಮ ವಹಿಸುತ್ತೇನೆ ಎಂದರು.



ಈ ವೇಳೆ ಶಾಸಕ ರಾಜು ಕಾಗೆ, ಮಾಜಿ ಶಾಸಕ ಶಾಮ‌ ಘಾಟಗೆ, ವಿ.ಪ. ಸದಸ್ಯ ಚನ್ನರಾಜ ಹೊಟ್ಟಿಹೊಳಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಇತರರು ಇದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ