ಖ್ಯಾತ ನಿರ್ದೇಶಕ ಎಸ್.ಕೆ.ಭಗವಾನ್ ನಿಧನ

A B Dharwadkar
ಖ್ಯಾತ ನಿರ್ದೇಶಕ ಎಸ್.ಕೆ.ಭಗವಾನ್ ನಿಧನ
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಬೆಂಗಳೂರು: ಡಾ. ರಾಜಕುಮಾರ ಅವರ ಹಲವಾರು ಸುಪರ್ ಹಿಟ್ ಚಿತ್ರಗಳನ್ನು ಅವರು ನಿರ್ದೇಶಿಸಿದ್ದ ಕನ್ನಡದ ಖ್ಯಾತ ಚಿತ್ರದ ನಿರ್ದೇಶಕ ಎಸ್.ಕೆ.ಭಗವಾನ್ ಅವರು ಇಂದು ಬೆಳಿಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು.

ಎಸ್..ಕೆ. ಭಗವಾನ್ (ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್) ಕನ್ನಡ ಚಿತ್ರರಂಗದ ಒಬ್ಬ ಹಿರಿಯ ನಿರ್ದೇಶಕರು ಹಾಗೂ ನಿರ್ಮಾಪಕರು.

ಮತ್ತೊಬ್ಬ ಹಿರಿಯ ನಿರ್ದೇಶಕ ದೊರೈರಾಜ್ ಅವರೊಡನೆ ಅವರ ಜೋಡಿ ದೊರೈ-ಭಗವಾನ್ ಎಂದೇ ಪ್ರಸಿದ್ಧ. ಇವರಿಬ್ಬರೂ ಸೇರಿ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸದಭಿರುಚಿಯ ಚಿತ್ರಗಳನ್ನು ಮಾಡಿರುವ ಅವರು 24 ಕಾದಂಬರಿಗಳನ್ನು ಸಿನೆಮಾಗೆ ಅಳವಡಿಸಿದ್ದಾರೆ. ಪ್ರಸ್ತುತ ಅವರು ‘ಆದರ್ಶ ಸಿನೆಮಾ ಇನ್ಸ್ಟಿಟ್ಯೂಟ್‍ನ’ ಪ್ರಾಂಶುಪಾಲರಾಗಿದ್ದಾರೆ. ಸಿನೆಮಾ ನಿರ್ದೇಶನದಿಂದ ನಿವೃತ್ತಿ ಹೊಂದಿದ್ದರು.

ಎಸ್.ಕೆ. ಭಗವಾನ್ ಅವರು 1933 ಜುಲೈ 3ರಂದು ತಮಿಳು ಬ್ರಾಹ್ಮಣ ಅಯ್ಯರ್ ಕುಟುಂಬದಲ್ಲಿ ಜನಿಸಿದರು. ಬೆಂಗಳೂರು ಹೈಸ್ಕೂಲಿನಲ್ಲಿ ವಿದ್ಯಾಭ್ಯಾಸ ಮಾಡಿದರು. ಯುವಕರಾಗಿದ್ದಾಗ ‘ಹಿರಣ್ಣಯ್ಯ ಮಿತ್ರ ಮಂಡಳಿ’ಯಲ್ಲಿ ನಾಟಕಗಳನ್ನು ಮಾಡುತ್ತಿದ್ದರು. 1956ರಲ್ಲಿ ಕಣಗಲ್ ಪ್ರಭಾಕರ ಶಾಸ್ತ್ರಿಗಳಿಗೆ ಸಹಾಯಕರಾಗಿ ಸಿನೆಮಾ ಜೀವನ ಆರಂಭಿಸಿದರು.

ಮತ್ತೊಬ್ಬ ಹಿರಿಯ ನಿರ್ದೇಶಕ ದೊರೈರಾಜ್ ಅವರೊಡನೆ ಅವರ ಜೋಡಿ ದೊರೈ-ಭಗವಾನ್ ಎಂದೇ ಪ್ರಸಿದ್ಧ. ಇವರಿಬ್ಬರೂ ಸೇರಿ ಅನನ್ಯ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸದಭಿರುಚಿಯ ಚಿತ್ರಗಳನ್ನು ಮಾಡಿರುವ ಅವರು 24 ಕಾದಂಬರಿಗಳನ್ನು ಸಿನೆಮಾಗೆ ಅಳವಡಿಸಿದ್ದಾರೆ. ಪ್ರಸ್ತುತ ಅವರು ‘ಆದರ್ಶ ಸಿನೆಮಾ ಇನ್ಸ್ಟಿಟ್ಯೂಟ್‍ನ’ ಪ್ರಾಂಶುಪಾಲರಾಗಿದ್ದಾರೆ. ಸಿನೆಮಾ ನಿರ್ದೇಶನದಿಂದ ನಿವೃತ್ತಿ ಹೊಂದಿದ್ದರು.

1966ಲ್ಲಿ ಎಂ.ಸಿ. ನರಸಿಂಹಮೂರ್ತಿ ಅವರೊಂದಿಗೂ ಸಂಧ್ಯಾರಾಗ ಸಿನೆಮಾ ನಿರ್ದೇಶಿಸಿದರು. ನಂತರ ದೊರೈ-ಭಗವಾನ್ ಜೋಡಿಯು ರಾಜಕುಮಾರ ನಾಯಕ ನಟನಾಗಿರುವ ‘ಜೇಡರ ಬಲೆ’ ಚಿತ್ರವನ್ನು ನಿರ್ದೆಶಿಸಿತು. ಇದು ಕನ್ನಡದಲ್ಲಿ ಜೇಮ್ಸ ಬಾಂಡ್‌ ಮಾದರಿಯ ಮೊದಲ ಚಿತ್ರವಾಗಿತ್ತು.

ಮುಂದಿನ ಅವರ ಎಲ್ಲಾ ಚಿತ್ರಗಳನ್ನು ಈ ನಿರ್ದೇಶಕರಿಬ್ಬರು ಜೋಡಿಯಾಗೇ ನಿರ್ದೇಶಿಸಿದರು. ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಚಂದನದ ಗೊಂಬೆ’, ‘ವಸಂತ ಗೀತ’, ‘ಆಪರೇಷನ್ ಡೈಮಂಡ್ ರಾಕೆಟ್’, ‘ಹೊಸಬೆಳಕು’, ‘ಯಾರಿವನು’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳನ್ನು ನಿರ್ದೇಶಿಸಿದರು. ಇವರ ೩೦ ಚಿತ್ರಗಳಲ್ಲಿ ಡಾ.ರಾಜಕುಮಾರ ಅವರು ನಾಯಕ ನಟರಾಗಿ ಅಭಿನಯಿಸಿದ್ದಾರೆ.

ಎಸ್.ಕೆ ಭಗವಾನ್ ಸಿನಿಮಾ ರಂಗದಲ್ಲಿ 65 ವರ್ಷದ ಸುದೀರ್ಘ ಅನುಭವ ಹೊಂದಿದ್ದರು. ದೊರೈರಾಜರ ಮರಣದ ನಂತರ ಇವರು ನಿರ್ದೇಶನದಿಂದ ನಿವೃತ್ತಿ ಹೊಂದಿದರು. 1992 ‘ಮಾಂಗಲ್ಯ ಬಂಧನ’ ದೊರೈ-ಭಗವಾನ್ ಜೋಡಿ ನಿರ್ದೇಶನದ ಕೊನೆಯ ಚಿತ್ರವಾಗಿತ್ತು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.