ಮಹಾರಾಷ್ಟ್ರಕ್ಕೆ ಕಾಲಿಟ್ಟ ಕಾಂಗ್ರೆಸ್ ಪಾದಯಾತ್ರೆ; ಶಿವಸೇನೆ ಬೆಂಬಲ ಸಾಧ್ಯತೆ

A B Dharwadkar
ಮಹಾರಾಷ್ಟ್ರಕ್ಕೆ ಕಾಲಿಟ್ಟ ಕಾಂಗ್ರೆಸ್ ಪಾದಯಾತ್ರೆ; ಶಿವಸೇನೆ ಬೆಂಬಲ ಸಾಧ್ಯತೆ
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಮುಂಬಯಿ : ಎರಡು ತಿಂಗಳ ಕಾಲ ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ಸಂಚರಿಸಿದ ನಂತರ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಇಂದು ಮಹಾರಾಷ್ಟ್ರ ಪ್ರವೇಶಿಸಲ್ಲಿದ್ದು ಮಂಗಳವಾರದಿಂದ 14 ದಿನಗಳ ಯಾತ್ರೆ ನಡೆಯಲಿದೆ.

ಕಾಂಗ್ರೆಸ್ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ನ ಬೆಂಬಲದಿಂದ ಮುಂಬಯಿಯ ವಿಧಾನಸಭಾ ಸ್ಥಾನ ಗೆದ್ದುಕೊಂಡಿರುವ ಉದ್ದವ್ ಠಾಕ್ರೆ ನೇತೃತ್ವದ ಶಿವಸೇನೆ ಕಾಂಗ್ರೆಸ್ ಯಾತ್ರೆಗೆ ಜೊತೆಗೂಡುವ ಸಾಧ್ಯತೆಯಿದೆ.
ತಮಿಳುನಾಡಿನಿಂದ ಪ್ರಾರಂಭವಾದ ಭಾರತ್ ಜೋಡೋ ಯಾತ್ರೆ ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣಗಳ ಮೂಲಕಸಾಗಿ ದಕ್ಷಿಣ ಭಾರತ ಯಾತ್ರೆ ಪೂರ್ಣಗೊಳಿಸಿದೆ.

ದೇಗ್ಲೂರ್ ಪಟ್ಟಣದ ಸ್ಥಳೀಯ ಗಿರಣಿ ಮೈದಾನದಲ್ಲಿ ರಾತ್ರಿ ವಿಶ್ರಾಂತಿ ಪಡೆದ ನಂತರ, ರಾಹುಲ್ ಗಾಂಧಿ ಅವರು ಮಂಗಳವಾರ ಬೆಳಿಗ್ಗೆ 14 ದಿನಗಳ ಮಹಾರಾಷ್ಟ್ರದ ಯಾತ್ರೆಯನ್ನು ಪ್ರಾರಂಭಿಸಲಿದ್ದಾರೆ.

ಇದು ಆರು ಲೋಕಸಭೆ ಮತ್ತು 15 ವಿಧಾನಸಭಾ ಕ್ಷೇತ್ರಗಳ ಮೂಲಕ ಐದು ಮರಾಠವಾಡ-ವಿದರ್ಭ ಪ್ರದೇಶಗಳ ಜಿಲ್ಲೆಗಳ 381 ಕಿಲೋಮೀಟರ್ ಯಾತ್ರೆ ಕ್ರಮಿಸಲಿದೆ.

ನಾಂದೇಡ್, ಹಿಂಗೋಲಿ, ವಾಶಿಮ್, ಅಕೋಲಾ ಮತ್ತು ಬುಲ್ಧಾನ ಜಿಲ್ಲೆಗಳ ಮೂಲಕ ನಡೆದ ನಂತರ ಭಾರತ್ ಜೋಡೋ ಯಾತ್ರೆಯು ನವೆಂಬರ್ 20 ರಂದು ಮಧ್ಯಪ್ರದೇಶವನ್ನು ಪ್ರವೇಶಿಸಲಿದೆ.

ಆದರೂ ಸ್ಥಳೀಯ ನಾಯಕರ ಬೇಡಿಕೆ ಕಾರಣದಿಂದ ನಂತರ ವೇಳಾಪಟ್ಟಿಯನ್ನು ಬದಲಾಯಿಸಲು ಮತ್ತು ಮಹಾರಾಷ್ಟ್ರದಲ್ಲಿ ಇನ್ನೂ ಮೂರು ದಿನಗಳ ಹೆಚ್ಚಿನ ಯಾತ್ರೆ ಕೈಗೊಳ್ಳಲು ಪ್ರಯತ್ನಗಳು ನಡೆಯುತ್ತಿವೆ ಎಂದು ವರದಿಯಾಗಿದೆ. ನವೆಂಬರ್ 10 ರಂದು ನಾಂದೇಡ್ ಮತ್ತು ನವೆಂಬರ್ 18 ರಂದು ಬುಲ್ಧಾನದಲ್ಲಿ ಎರಡು ದೊಡ್ಡ ರ್ಯಾಲಿಗಳು ನಡೆಯಲಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.