ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ : ಡಿ.ಕೆ ಶಿವಕುಮಾರ 

A B Dharwadkar
ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ : ಡಿ.ಕೆ ಶಿವಕುಮಾರ 
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಬೆಂಗಳೂರು: ಮುಂದಿನ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ ಎಂದು ಡಿ.ಕೆ ಶಿವಕುಮಾರ ಹೇಳಿದ್ದಾರೆ.

ನಿನ್ನೆ ಕೊಪ್ಪಳದ ಮದುವೆ ಸಮಾರಂಭದ ವೇದಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಅವರು ಘೋಷಣೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ, ನನಗೂ ಹಕ್ಕಿಲ್ಲ. ಎಐಸಿಸಿಗೆ ಮಾತ್ರ ಹಕ್ಕು ಇದೆ ಎಂದಿದ್ದಾರೆ.

ಸಿದ್ದರಾಮಯ್ಯ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಕೆಲ ಸಂದರ್ಭಗಳಲ್ಲಿ ಕಳೆದ ಸೋಲು ಕಂಡವರಿಗೆ ಹುರದುಂಬಿಸಿ ಹೇಳಿರಬಹುದು. ಅದನ್ನು ಬಿಟ್ಟರೆ ಮಲ್ಲಿಕಾರ್ಜುನ ಖರ್ಗೆ ಅವರೇ ನಮಗೆ ಹೈಕಮಾಂಡ, ಅವರಿಗೆ ಘೋಷಣೆ ಮಾಡುವ ಹಕ್ಕಿದೆ. ನನಗೂ ಕೂಡ ಆ ಹಕ್ಕಿಲ್ಲ ಎಂದು ಹೇಳಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.