ಮರಕ್ಕೆ ವಾಹನ ಡಿಕ್ಕಿ; ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಹೊರಟಿದ್ದ ಆರು ಭಕ್ತರ ಸಾವು

A B Dharwadkar
ಮರಕ್ಕೆ ವಾಹನ ಡಿಕ್ಕಿ; ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಹೊರಟಿದ್ದ ಆರು ಭಕ್ತರ ಸಾವು
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ರಾಮದುರ್ಗ : ಹೊಸ ವರ್ಷದ ಮೊದಲನೇ ವಾರದಲ್ಲಿಯೇ ಬುಧವಾರ ತಡರಾತ್ರಿ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಭಕ್ತರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನ ರಾಮದುರ್ಗ ತಾಲೂಕಿನ ಚಿಂಚನೂರು ವಿಠ್ಠಲ ದೇವಸ್ಥಾನದ ಬಳಿ ಭೀಕರ ಅಪಘಾತದಲ್ಲಿ ಆರು ಜನ ಮೃತಪಟ್ಟ ಘಟನೆ ನಡೆದಿದೆ.

ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಭಕ್ತರನ್ನು ಕರೆದುಕೊಂಡು ಹೊರಟಿದ್ದ ಮಹೇಂದ್ರ ಗೂಡ್ಸ ವಾಹನ ಆಲದ ಮರಕ್ಕೆ ರಭಸಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಅಪಘಾತದಲ್ಲಿ ಮೃತಪಟ್ಟವರು ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ಹನಮವ್ವ ಮ್ಯಾಗಾಡಿ (25), ದೀಪಾ ಹರಿಜನ (31), ಸವಿತಾ ಮುಂಡಾಸ (17), ಸುಪ್ರೀತಾ ಹರಿಜನ ( 11), ಯಲ್ಲಪ್ಪ ಬನ್ನೂರ (42), ಮತ್ತು ಇಂದ್ರವ್ವ ಸಿದ್ದಮೇತ್ರಿ (24) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ 16 ಜನ ಗಾಯಗೊಂಡಿದ್ದು ಅವರನ್ನು ಗೋಕಾಕ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸೇರಿಸಲಾಗಿದೆ. ಕಟಕೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಪಘಾತದ ಕುರಿತು ಅಘಾತ ವ್ಯಕ್ತ ಪಡಿಸಿದ್ದು ಸರಕಾರದಿಂದ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.