ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ ಆಚರಣೆ ಅನುಮತಿಗೆ ಶ್ರೀರಾಮ ಸೇನೆ ಆಗ್ರಹ 

A B Dharwadkar
ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ ಆಚರಣೆ ಅನುಮತಿಗೆ ಶ್ರೀರಾಮ ಸೇನೆ ಆಗ್ರಹ 
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಧಾರವಾಡ: ಹುಬ್ಬಳ್ಳಿಯ ಈದ್ಗಾ ಮೈದಾನ ಮೈದಾನದಲ್ಲಿ ಗಣೇಶೋತ್ಸವಕ್ಕೆ ಆಚರಿಸಲು ಅನುಮತಿ ನೀಡಿರುವ ಬೆನ್ನಲ್ಲೇ ವಿವಿಧ ಸಂಘಟನೆಗಳು ಮೈದಾನದಲ್ಲಿ ಉತ್ಸವ ಆಚರಣೆಗೆ ಅನುಮತಿ ಕೇಳುತ್ತಿವೆ.

ಸದ್ಯ ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ ಆಚರಣೆಗೆ ಅನುಮತಿ ನೀಡಬೇಕೆಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಶ್ರೀರಾಮಸೇನಾ ಸಂಘಟನಾ ಕಾರ್ಯಕರ್ತರು ಮನವಿ ಮಾಡಿದ್ದಾರೆ.

ಹೀಗಾಗಿ ಅನೇಕ ದೇಶ ಭಕ್ತಿಯ ಕಾರ್ಯಕ್ರಮಗಳಿದ್ದು, ನಮಗೆ ಮೈದಾನ ನೀಡಬೇಕೆಂದು ಸಂಘಟಕರು ಆಯುಕ್ತರಲ್ಲಿ ಮನವಿ ಮಾಡಿದ್ದಾರೆ.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಬಳಿಕ, ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಅನುಮತಿ ನೀಡಬೇಕೆಂದು ಎಐಎಂಎಂ ಕಾರ್ಯಕರ್ತರು ಪಾಲಿಕೆ ಆಯುಕ್ತರಲ್ಲಿ ಮನವಿ ಮಾಡಿದ್ದಾರೆ. ಇದರಿಂದ ಮಾಹಾನಗರ ಪಾಲಿಕೆ ಗೊಂದಲಕ್ಕೆ ಸಿಲುಕಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.