ಕಿತ್ತೂರು ಉತ್ಸವದ ವೀರಜ್ಯೋತಿಗೆ ನಾಳೆ ಮುಖ್ಯಮಂತ್ರಿ ಚಾಲನೆ 

A B Dharwadkar
ಕಿತ್ತೂರು ಉತ್ಸವದ ವೀರಜ್ಯೋತಿಗೆ ನಾಳೆ ಮುಖ್ಯಮಂತ್ರಿ ಚಾಲನೆ 
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಬೆಂಗಳೂರು: ಬೆಳಗಾವಿಗಷ್ಟೇ ಸೀಮಿತವಾಗಿದ್ದ ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ಈ ಬಾರಿ ರಾಜ್ಯ ಮಟ್ಟದ ಮನ್ನಣೆ ಸಿಕ್ಕಿದ್ದು, ಅಕ್ಟೋಬರ್​​ 23ರಿಂದ 3 ದಿನಗಳ ಕಾಲ ಕಿತ್ತೂರು ಉತ್ಸವ ನಡೆಯಲಿದೆ.

ಈ ಹಿನ್ನೆಲೆ ನಾಳೆಯಿಂದ ಐತಿಹಾಸಿಕ ಕೇಂದ್ರಗಳಿಗೆ ವೀರಜ್ಯೋತಿ ಸಂಚರಿಸಲಿದೆ ಎಂದು ವಿಧಾನಸೌಧದಲ್ಲಿ ಸಚಿವ ಗೋವಿಂದ ಕಾರಜೋಳ ಹೇಳಿದರು.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ನಾಳೆ ಗಾಂಧಿ ಜಯಂತಿಯಂದು ಬೆಂಗಳೂರಿನ ಪುರಭವನದಲ್ಲಿ ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಈಗಾಗಲೇ ಕಿತ್ತೂರು ಉತ್ಸವಕ್ಕೆ 2 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಸಹಯೋಗದಲ್ಲಿ ಅಕ್ಟೋಬರ್​​ 23, 24, 25ರಂದು ಕಿತ್ತೂರಿನಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾಹಿತಿ ನೀಡಿದರು.

ಕಿತ್ತೂರು ಉತ್ಸವದ ವೀರಜ್ಯೋತಿ ಯಾತ್ರೆಯು ಬೆಳಗಾವಿ ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಸಂಚರಿಸುತ್ತಿತ್ತು. ಆದರೆ ಈ ವರ್ಷ ವಿಶೇಷವಾಗಿ ರಾಜ್ಯದ ಎಲ್ಲ ಜಿಲ್ಲೆಗಳ ಕೇಂದ್ರ ಸ್ಥಾನಗಳಿಗೆ ವೀರಜ್ಯೋತಿ ಯಾತ್ರೆ ತಲುಪಲಿದ್ದು, ನಾಳೆ ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಪುರಭವನದ ವೀರಜ್ಯೋತಿ ಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.