ಪತ್ನಿಯ ಉಸಿರುಗಟ್ಟಿಸಿ ಕೊಲೆಗೈದ ಪತಿಗೆ ಶಿಕ್ಷೆ ಜಾರಿ

A B Dharwadkar
ಪತ್ನಿಯ ಉಸಿರುಗಟ್ಟಿಸಿ ಕೊಲೆಗೈದ ಪತಿಗೆ ಶಿಕ್ಷೆ ಜಾರಿ

ಬೆಳಗಾವಿ :

ಪತ್ನಿಯನ್ನು ಕೊಲೆಗೈದ ಪತಿಗೆ ಬೆಳಗಾವಿಯ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೋಮವಾರ ಕಠಿಣ ಜೀವಾವಧಿ ಶಿಕ್ಷೆ ಮತ್ತು ರೂ.50 ಸಾವಿರ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಮೂಲತಃ ವಿಜಯಪುರ ಜಿಲ್ಲೆ ತಾಳಿಕೋಟಿಯ
ಪರಶುರಾಮ ಗಣಪತಿ ಪೀಸೆ(40)ಶಿಕ್ಷೆಗೊಳಗಾದ ಆರೋಪಿ.

2020 ರ ಫೆಬ್ರವರಿ 13 ರಂದು ಮಧ್ಯಾಹ್ನ 1 ರಿಂದ 1.30 ರ ಸುಮಾರಿಗೆ ಈತ ತನ್ನ ಪತ್ನಿ ಕವಿತಾ ಅವರೊಂದಿಗೆ ತನ್ನ ಸಣ್ಣ ಮಕ್ಕಳನ್ನು ಎತ್ತಿಕೊಳ್ಳುವ ವಿಚಾರದಲ್ಲಿ ತಂಟೆ ತೆಗೆದು ಅದೇ ಸಿಟ್ಟಿನಿಂದ ಅವರ ಕುತ್ತಿಗೆ ಹಿಚುಕಿ ಉಸಿರುಗಟ್ಟಿಸಿ ಕೊಲೆಗೈದಿದ್ದ. ಈ ಬಗ್ಗೆ ಕವಿತಾ ಅವರ ತಂದೆ ಕಲಬುರ್ಗಿಯ ಸುನಿಲ್ ಕುಮಾರ್ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಈ ಪ್ರಕರಣದ ತನಿಖೆ ನಡೆಸಿದ ಅಂದಿನ ಕ್ಯಾಂಪ್ ಪೊಲೀಸ್ ಠಾಣೆಯ ಪಿ ಐ ಡಿ.ಸಂತೋಷ ಕುಮಾರ್ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರಕಾರದ ಪರ ಸರ್ಕಾರಿ ಅಭಿಯೋಜಕ ಐ.ಎಂ.ಮಠಪತಿ ವಾದ ಮಂಡಿಸಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.