ಬೆಳಗಾವಿ: ಪತಿಯ ಮೇಲೆ ಪತ್ನಿ ಕಾದ ಎಣ್ಣೆ ಸುರಿದು ಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಬಳಿ ನಡೆದಿದೆ.
ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಭಾಷ್ ಪಾಟೀಲ್ (55) ಮೇಲೆ ಪತ್ನಿ ವೈಶಾಲಿ ಕಾದ ಎಣ್ಣೆ ಸುರಿದಿದ್ದಾಳೆ. ಸುಭಾಷ್ ಪಾಟೀಲ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಭಾಷ್ ಸಿಲಿಂಡರ್ ವಿತರಣೆ ಕೆಲಸ ಮಾಡುತ್ತಿದ್ದರು. ಪತ್ನಿ ವೈಶಾಲಿಗೆ ಪತಿ ಮೇಲೆ ಅನುಮಾನ. ಪತಿ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಮನೆಗೆ ಬಂದ ಪತಿ ಮೇಳೆ ಬಿಸಿ ಎಣ್ಣೆ ಸುರಿದಿದ್ದಾಳೆ.
ಸೋಮವಾರ ಮಧ್ಯಾಹ್ನ ಅವರ ಪತ್ನಿ ವೈಶಾಲಿ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಜಗಳವಾಗಿದೆ. ಸುಭಾಷ್ ಅವರ ತಲೆಯ ಮೇಲೆ ಎಣ್ಣೆ ಸುರಿದಿದ್ದಾರೆ. ಸುಭಾಷ್ ಗಂಭೀರ ಗಾಯಗೊಂಡು ತಲೆ, ಕಣ್ಣು ಮತ್ತು ದೇಹದ ಇತರ ಭಾಗಗಳಿಗೂ ಬಿಸಿ ಎಣ್ಣೆ ಹರಡಿದೆ. ನೋವು ತಾಳಲಾರದೆ ನೀರಿನ ಟ್ಯಾಂಕಿಗೆ ಹಾರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗಾಯಾಳು ಸುಭಾಷ್ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

