ಇಂಥ ಅಧಿಕಾರಿಗಳೂ ಇದ್ದಾರೆ; 24 ಗಂಟೆಯಲ್ಲಿಯೇ ಅನುಕಂಪ ಆಧಾರದ ನೌಕರಿ

A B Dharwadkar
ಇಂಥ ಅಧಿಕಾರಿಗಳೂ ಇದ್ದಾರೆ; 24 ಗಂಟೆಯಲ್ಲಿಯೇ ಅನುಕಂಪ ಆಧಾರದ ನೌಕರಿ
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಬೆಳಗಾವಿ : ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ‌ಪ್ರಥಮ ದರ್ಜೆ ಸಹಾಯಕರೊಬ್ಬರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ್ದರಿಂದ ಅವರ ಅವಲಂಬಿತ ಕಿರಿಯ ಸಹೋದರನಿಗೆ ಕೇವಲ 24 ಗಂಟೆಯಲ್ಲಿ ಅನುಕಂಪ ಆಧಾರಿತ ನೇರ ನೇಮಕಾತಿ ಆದೇಶ ನೀಡುವ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಕ್ಷಿಪ್ರಗತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳೂ ಇದ್ದಾರೆ ಎಂದು ಮತ್ತೆ ಸಾಬೀತು ಮಾಡಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಚಿನ ಮಹಾದೇವ ಬಾದುಲೆ ಅವರು ದಿನಾಂಕ ಆಗಸ್ಟ್ 22 ರಂದು ಅನಾರೋಗ್ಯದಿಂದ ನಿಧನ ಹೊಂದಿದ್ದರು.

ತಮ್ಮ ಸಹೋದರ ಸೇವೆಯಲ್ಲಿರುವಾಗ ನಿಧನ ಹೊಂದಿರುವುದರಿಂದ ಕುಟುಂಬ ನಿರ್ವಹಣೆಗಾಗಿ ತಮಗೆ ಅನುಕಂಪ ಆಧಾರದ ಮೇಲೆ ನೌಕರಿ ನೀಡಬೇಕು ಎಂದು ಬಸವರಾಜ‌‌‌ ಮಹಾದೇವ ಬಾದುಲೆ ಅವರು ಅರ್ಜಿ ಸಲ್ಲಿಸಿದ್ದರು.

ಸದರಿ ಅರ್ಜಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು, ಮೃತ ಸಚಿನ್ ಬಾದುಲೆ ಅವರ ಅವಲಂಬಿತ ಸಹೋದರ ಬಸವರಾಜ ಮಹಾದೇವ ಬಾದುಲೆ ಅವರನ್ನು ಕೇವಲ 24 ಗಂಟೆಗಳ ಅವಧಿಯಲ್ಲಿ ಗ್ರುಪ್ “ಸಿ” ಹುದ್ದೆಗೆ ನೇರ ನೇಮಕಾತಿ ಮಾಡಿದ್ದಾರೆ.

ಬಿ.ಎ. ಪದವೀಧರರಾಗಿರುವ ಬಸವರಾಜ ಮಹಾದೇವ ಬಾದುಲೆ ಅವರನ್ನು ಪ್ರಥಮ ದರ್ಜೆ ಸಹಾಯಕರನ್ನಾಗಿ ನೇರ ನೇಮಕ‌ ಮಾಡಿ ಚಿಕ್ಕೋಡಿ ತಹಶಿಲ್ದಾರ ಕಚೇರಿಯಲ್ಲಿ ಖಾಲಿ ಇರುವ ಪ್ರ.ದ.ಸ. ಹುದ್ದೆಗೆ ನಿಯುಕ್ತಿಗೊಳಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಆದೇಶ ಸಹ ಹೊರಡಿಸಿರುತ್ತಾರೆ.

ಕಚೇರಿಯ ಸಿಬ್ಬಂದಿಯೊಬ್ಬರು ಅಕಾಲಿಕವಾಗಿ ನಿಧನ ಹೊಂದಿರುವುದರಿಂದ ಅವರ ಕುಟುಂಬವು ಸಂಕಷ್ಟಕ್ಕೆ ಸಿಲುಕಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು, ಕೂಡಲೇ ನೇರ ನೇಮಕಾತಿ ಆದೇಶ ನೀಡುವ ಮೂಲಕ ಮತ್ತೊಮ್ಮೆ ಕೆಲಸದ ದಕ್ಷತೆ ಪ್ರದರ್ಶಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.