ಚಿರತೆ ಬಂತೆಂಬ ವದಂತಿ; ಸಿಕ್ಕಿದ್ದು ಕತ್ತೆ ಕಿರುಬ

A B Dharwadkar
ಚಿರತೆ ಬಂತೆಂಬ ವದಂತಿ; ಸಿಕ್ಕಿದ್ದು ಕತ್ತೆ ಕಿರುಬ
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಅಥಣಿ, 5- ತಾಲೂಕಿನ ಪಟ್ಟಣದ ಶಿವಯೋಗಿ ನಗರದ ಕುಮಠಳ್ಳಿ ಫಾರ್ಮಹೌಸ್ ನಲ್ಲಿ ಕತ್ತೆ ಕಿರುಬ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸಿತ್ತು. ಕತ್ತೆ ಕಿರುಬವನ್ನು ನೋಡಿದ ಸಾರ್ವಜನಿಕರು ಚಿರತೆ ಬಂದಿದೆ ಎಂದು ವದಂತಿ ಹಬ್ಬಿಸಿದ್ದರು.

ಬೆಳಗಾವಿಯಲ್ಲಿ ಚಿರತೆ ಕಾರ್ಯಾಚರಣೆ ವಿಫಲದ ನಂತರ ಅಥಣಿ ಮತ್ತು ಕಾಗವಾಡ ತಾಲೂಕಿನ ಹಲವು ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡ ವದಂತಿ ಹಬ್ಬಿತ್ತು. ಸ್ಥಳಕ್ಕೆ ಭೇಟಿ ನೀಡಿ ಹೆಜ್ಜೆ ಗುರುತುಗಳನ್ನು ಪರಿಶೀಲಿಸಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ ಕತ್ತೆ ಕಿರುಬದ ಹೆಜ್ಜೆ ಎಂದು ಹೇಳಿದ್ದರು.

ಸದ್ಯ ಕುಮಠಳ್ಳಿಯವರ ಫಾರ್ಮಹೌಸ್ ನಲ್ಲಿ ಪತ್ತೆಯಾದ ಕತ್ತೆ ಕಿರುಬವನ್ನು ಸತತವಾಗಿ ಎರಡು ಗಂಟೆ ಯಶಸ್ವಿ ಕಾರ್ಯಾಚರಣೆ ಮಾಡಿ ಹಿಡಿದು ಸಾರ್ವಜನಿಕರ ಆತಂಕ ದೂರ ಮಾಡಲಾಗಿದೆ.

ಈ ಕುರಿತು ವಲಯ ಅರಣ್ಯಾಧಿಕಾರಿ ಪ್ರಶಾಂತ ಗಾಣಿಗೇರ ಮಾತನಾಡಿ, ಕತ್ತೆ ಕಿರುಬು ಕಾಣಿಸಿಕೊಂಡ ಕರೆ ಬಂದ ನಂತರ ಯಶಸ್ವಿಯಾಗಿ ಹಾಗೂ ಸುರಕ್ಷಿತವಾಗಿ ಸೆರೆ ಹಿಡಿದಿದ್ದು, ಜೊತೆಗೆ ಅಥಣಿ ತಾಲೂಕಿನ ವ್ಯಾಪ್ತಿಯಲ್ಲಿ ಎಲ್ಲಿಯೂ ಚಿರತೆ ಬಂದಿಲ್ಲ, ಇದು ಕತ್ತೆ ಕಿರುಬದ ಹೆಜ್ಜೆ ಗುರುತುಗಳಾಗಿದ್ದು, ಒಂದು ವೇಳೆ ಕಾಡು ಪ್ರಾಣಿಗಳು ಕಂಡುಬಂದಲ್ಲಿ ಭಯಭೀತರಾಗದೇ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಿದರು.

ಈ ಕಾರ್ಯಾಚರಣೆಯಲ್ಲಿ ಎಸ್ ಎಮ್ ಮುಂಜೆ, ಎಮ್ ವಿ ಪಾಟೀಲ, ಎಸ್ ಎಂ ಬಾಗಿ, ಎಮ್ ಸಿ ಚೌಗಲಾ, ಎಂ ಆಯ್ ಢಾಲಾಯತ್, ಆರ್ ಎಮ್ ಹೊಸಟ್ಟಿ, ನಾಗಪ್ಪ ಅಚಾರಟ್ಟಿ, ಎಸ್ ಎಮ್ ಬಾಗಿ, ಸೇರಿದಂತೆ ಇತರರು ಇದ್ದರು,

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.