ಆರ್ಥಿಕ ಸುಧಾರಣೆಗಳಿಗಾಗಿ ಮನಮೋಹನ್ ಸಿಂಗ್ ಅವರಿಗೆ ಋಣಿಯಾಗಿದ್ದೇವೆ : ಕೇಂದ್ರ ಸಚಿವ

A B Dharwadkar
ಆರ್ಥಿಕ ಸುಧಾರಣೆಗಳಿಗಾಗಿ ಮನಮೋಹನ್ ಸಿಂಗ್ ಅವರಿಗೆ ಋಣಿಯಾಗಿದ್ದೇವೆ : ಕೇಂದ್ರ ಸಚಿವ
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಹೊಸದಿಲ್ಲಿ: ಆರ್ಥಿಕ ಸುಧಾರಣೆಗಳಿಗಾಗಿ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರಿಗೆ ದೇಶ ಋಣಿಯಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ ಗಡ್ಕರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಪೋರ್ಟಲ್ ಟ್ಯಾಕ್ಸ್‌ ಇಂಡಿಯಾ ಆನ್‌ಲೈನ್ ಆಯೋಜಿಸಿದ್ದ ಟಿಐಒಎಲ್ ಅವಾರ್ಡ್ಸ 2022 ಸಮಾರಂಭದಲ್ಲಿ ಮಾತನಾಡಿದ ಅವರು, ಬಡ ಜನರಿಗೆ ಅದರ ಪ್ರಯೋಜನಗಳನ್ನು ಒದಗಿಸುವ ಉದ್ದೇಶದಿಂದ ಭಾರತಕ್ಕೆ ಉದಾರ ಆರ್ಥಿಕ ನೀತಿಯ ಅಗತ್ಯವಿದೆ ಎಂದು ಹೇಳಿದರು.

ಮನಮೋಹನ ಸಿಂಗ್ ಅವರು 1991ರಲ್ಲಿ ಹಣಕಾಸು ಸಚಿವರಾಗಿ ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳು ಭಾರತಕ್ಕೆ ಹೊಸ ದಿಕ್ಕನ್ನೇ ನೀಡಿದವು. 1990ರ ದಶಕದ ಮಧ್ಯಭಾಗದಲ್ಲಿ ನಾನು ಮಹಾರಾಷ್ಟ್ರದಲ್ಲಿ ಸಚಿವನಾಗಿದ್ದೆ. ಮನಮೋಹನ‌ ಸಿಂಗ್‌ ಅವರು ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳಿಂದಾಗಿ, ಮಹಾರಾಷ್ಟ್ರದಲ್ಲಿ ರಸ್ತೆಗಳನ್ನು ನಿರ್ಮಿಸಲು ಹಣ ಸಂಗ್ರಹಿಸಲು ನನಗೆ ಸಾಧ್ಯವಾಯಿತು. ಉದಾರೀಕರಣ ಹಲವು ಅವಕಾಶಗಳ ಬಾಗಿಲನ್ನು ತೆರೆದಿದೆ ಎಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.